ಕರ್ನ್ನಪಾಡಿ ರಥೋತ್ಸವ ಮುಂದೂಡಿಕೆ
Update: 2021-05-11 20:10 IST
ಉಡುಪಿ, ಮೇ 11: ಇತಿಹಾಸ ಪ್ರಸಿದ್ಧ ಉಡುಪಿ ಕನ್ನರ್ಪಾಡಿಯ ಶ್ರೀ ಜಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮೇ 13ರಿಂದ 18ರವರೆಗೆ ನಡೆಯ ಬೇಕಿದ್ದ ವಾರ್ಷಿಕ ರಥೋತ್ಸವವನ್ನು ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದೂಡಲಾಗಿದೆ. ಮುಂದಿನ ಸೂಕ್ತ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ದೇವಳದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.