ಮಂಜಪ್ಪ ಮಣಿಪುರ
Update: 2021-05-11 15:49 GMT
ಉಡುಪಿ, ಮೇ 11: ತಾಲೂಕಿನ ಮಾರ್ಪಳ್ಳಿ ಗ್ರಾಮದ ನಿವಾಸಿ ಮಂಜಪ್ಪ ಮಣಿಪುರ (85) ಮೇ 10ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿಯಾಗಿದ್ದ ಮಂಜಪ್ಪ ಅವರು, ಕೊರಂಗ್ರಪಾಡಿ ಬ್ರಹ್ಮಶ್ರೀ ನಾರಾಯಣಗುರು ಸಂಘದ ಸ್ಥಾಪಕ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದರು. ಸ್ಥಳೀಯ ಸಂಘ ಸಂಸ್ಥೆಗಳಲ್ಲಿಯೂ ಇವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.