ಕಾಪು: ಅಕ್ರಮ ಕಸಾಯಿ ಖಾನೆಗೆ ದಾಳಿ ; ಆರು ಮಂದಿ ಸೆರೆ

Update: 2021-05-11 17:02 GMT

ಕಾಪು : ಇಲ್ಲಿನ ಠಾಣೆ ವ್ಯಾಪ್ತಿಯ ಮೂಳೂರು ಎಂಬಲ್ಲಿ ಅಕ್ರಮವಾಗಿ ಕಸಾಯಿ ಖಾನೆಗೆ ದಾಳಿ ನಡೆಸಿ ಆರು ಜನರನ್ನು ಬಂಧಿಸಿದ್ದು, ಮೂವರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಪು ಎಸ್‍ಐ ರಾಘವೇಂದ್ರ ಸಿ ಹಾಗೂ ತಂಡ ಮಂಗಳವಾರ ಬೆಳಗ್ಗೆ ಕಸಾಯಿ ಖಾನೆಗೆ ದಾಳಿ ನಡೆಸಿ ಮನ್ಸೂರ್ ಅಹಮ್ಮದ್, ಮಹಮ್ಮದ್ ಅಝರುದ್ದೀನ್, ನವಾಝ್, ಮಹಮ್ಮದ್ ಹನೀಫ್, ಮಹಮ್ಮದ್ ಇಸ್ಮಾಯಿಲ್, ಉಮ್ಮರಬ್ಬ ಎಂಬವರನ್ನು ಬಂಧಿಸಿದ್ದಾರೆ. ಇಸ್ಮಾಯಿಲ್, ರಪೀಕ್, ಅಬ್ಬು ಮಹಮ್ಮದ್ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News