ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಮೇ 14ರಂದು ಈದುಲ್ ಫಿತ್ರ್

Update: 2021-05-12 15:43 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 12: ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯಾದ್ಯಂತ ಶುಕ್ರವಾರ (ಮೇ 14) ಈದುಲ್ ಫಿತ್ರ್ ಆಚರಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರದರ್ಶನ ಸಮಿತಿ ಸದಸ್ಯ ಮೌಲಾನ ಮಕ್ಸೂದ್ ಇಮ್ರಾನ್ ತಿಳಿಸಿದ್ದಾರೆ.

ಬುಧವಾರ ನಗರದ ಕನ್ನಿಂಗ್‍ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹೊಸದಿಲ್ಲಿ, ಚೆನ್ನೈ, ಹೈದರಾಬಾದ್, ಲಕ್ನೋ ಸೇರಿದಂತೆ ದೇಶದ ಯಾವುದೇ ಪ್ರಮುಖ ನಗರಗಳಲ್ಲಿಯೂ ಚಂದ್ರ ದರ್ಶನವಾಗಿರುವ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೆ, ನಮ್ಮ ರಾಜ್ಯದ ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೈಸೂರು ಸೇರಿದಂತೆ ಎಲ್ಲಿಯೂ ಚಂದ್ರದರ್ಶನವಾದ ಮಾಹಿತಿ ಇಲ್ಲ ಎಂದು ಅವರು ಹೇಳಿದರು.

ಆದುದರಿಂದ, ಶುಕ್ರವಾರ ಈದುಲ್ ಫಿತ್ರ್ ಆಚರಣೆ ಮಾಡಲಾಗುವುದು. ಕರಾವಳಿ ಜಿಲ್ಲೆಗಳಲ್ಲಿ ನಾಳೆ(ಗುರುವಾರ) ಹಬ್ಬ ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News