×
Ad

ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಸುಳಿವು ನೀಡಿದ ಸಚಿವ ಆರ್.ಅಶೋಕ್

Update: 2021-05-14 18:06 IST

ಬೆಂಗಳೂರು, ಮೇ 14: ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಕರಣಗಳು ಕಡಿಮೆ ಆಗುತ್ತಿವೆ. ಹೀಗಾಗಿ ಲಾಕ್‍ಡೌನ್ ಮುಂದುವರಿಸಿದರೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದ ಹೊಸಕೆರೆಹಳ್ಳಿಯಲ್ಲಿ ಬಿಬಿಎಂಪಿಯ ನೂತನ ಟ್ರಯಾಜ್ ಮತ್ತು ಕೋವಿಡ್ ಸ್ಥಿರೀಕರಣ ಘಟಕ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪರವರಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಬೆಂಗಳೂರು ನಾಗರಿಕನಾಗಿ ಲಾಕ್‍ಡೌನ್ ಮುಂದುವರಿಕೆ ಆಗಬೇಕು ಎಂದು ಹೇಳುತ್ತಿದ್ದಾರೆ. ನಾವು ಲಾಕ್‍ಡೌನ್ ಬೇಕು ಅಂತ ಸಿಎಂಗೆ ಸಲಹೆ ಮನವಿ ಮಾಡುತ್ತೇವೆ ಎಂದರು.

ಮಹಾರಾಷ್ಟ್ರ, ಹೊಸದಿಲ್ಲಿ ಪ್ರಕರಣ ನಮ್ಮ ಮುಂದಿದೆ. ಅಲ್ಲಿ ಮೊದಲ ಅಲೆ ಬಂತು. ಅವರು ಲಾಕ್‍ಡೌನ್ ವಿಸ್ತರಣೆ ಮಾಡಿದರು. ಅದನ್ನು ನಾವು ಅನುಸರಿಸುತ್ತೇವೆ ಎಂದ ಅವರು, ಕರ್ನಾಟಕದಲ್ಲಿಯೂ ಲಾಕ್‍ಡೌನ್ ವಿಸ್ತರಣೆ ಆಗಬೇಕು. ಸಿಎಂ ಈಗಿರುವ ಲಾಕ್‍ಡೌನ್ ಮುಗಿಯೋ 3-4 ದಿನಗಳಲ್ಲಿ ಸಭೆ ಮಾಡಲಿದ್ದು, ಸಭೆಯಲ್ಲಿ ಈ ಬಗ್ಗೆ ಸಲಹೆ ನೀಡಲಿದ್ದು ಸಿಎಂ ಅಂತಿಮವಾಗಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ನಿರ್ಧಾರ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

10 ದಿನಗಳಲ್ಲಿ ಈ ಆಸ್ಪತ್ರೆ ಸಿದ್ಧತೆ ಮಾಡಿದ್ದೇವೆ. ಆಕ್ಸಿಜನ್ ಮತ್ತು ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆ ಇಲ್ಲಿ ಇದೆ. ಡಬಲ್ ಎಂಜಿನ್ ಸಿಸ್ಟಮ್ ಇಲ್ಲಿ ವ್ಯವಸ್ಥೆ ಇಲ್ಲಿ ಮಾಡಿದ್ದೇವೆ. ಇದರಿಂದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಸ್ಥಳೀಯವಾಗಿ ಅನುಕೂಲ ಆಗಲು ಈ ಆಸ್ಪತ್ರೆ ಪ್ರಾರಂಭ ಮಾಡಲಾಗಿದೆ. ಅಗತ್ಯ ಸಿಬ್ಬಂದಿ ನೇಮಕ ಮಾಡಲಾಗಿದೆ. ಸ್ಪೆಷಲಿಸ್ಟ್ ವೈದ್ಯರು ಇಲ್ಲಿ ಇದ್ದಾರೆ ಎಂದು ಅವರು ತಿಳಿಸಿದರು.

ಮಕ್ಕಳಿಗಾಗಿ ವಿಶೇಷ ಕೇಂದ್ರ ಪ್ರಾರಂಭ ಮಾಡ್ತಿದ್ದೇವೆ. 50 ಮಕ್ಕಳ ಬೆಡ್ ಪ್ರಾರಂಭ ಮಾಡಲಾಗುತ್ತಿದೆ. ಪೋಷಕರಿಗೂ ಉಳಿಯಲು ಅವಕಾಶ ನೀಡಲಾಗುತ್ತೆ. ಮಕ್ಕಳಿಗೆ ಆಗುವ ಸಮಸ್ಯೆ ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವ ಆರ್.ಅಶೋಕ್ ಇದೇ ವೇಳೆ ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News