ನ್ಯಾಯಾಧೀಶರ ಕೊರೋನ ಚಿಕಿತ್ಸೆಗೆ ನೋಡೆಲ್ ಅಧಿಕಾರಿಗಳ ನೇಮಕ

Update: 2021-05-15 15:35 GMT

ಉಡುಪಿ, ಮೇ 15:ಜಿಲ್ಲೆಯ ನ್ಯಾಯಾಧೀಶರಿಗೆ,ಅಧಿಕಾರಿ, ಸಿಬ್ಬಂದಿ ಹಾಗೂ ನ್ಯಾಯವಾದಿಗಳಿಗೆ ಕೋವಿಡ್-19 ಸೋಂಕು ತಗುಲಿದಲ್ಲಿ ಚಿಕಿತ್ಸೆಗೆ ಸ್ಪಂದಿಸುವ ಸಲುವಾಗಿ ನೋಡೆಲ್ ಅಧಿಕಾರಿಯಾಗಿ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು (ಮೊ.ನಂ: 9448169434), ಸಹಾಯಕ ನೋಡೆಲ್ ಅಧಿಕಾರಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ (ಮೊ.ನಂ: 7899508907), ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಮೊಹಮ್ಮದ್ ಇಸಾಕ್ (ಮೊ.ನಂ:9448780521) ಹಾಗೂ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಅಬ್ಬಾಸ್ ಎಸ್ (ಮೊ.ನಂ: 9448216724) ಮತ್ತು ವೈದ್ಯರಾಗಿ ಜಿಲ್ಲಾ ಕೋವಿಡ್-19 ವಿಶೇಷ ನೋಡೆಲ್ ಅಧಿಕಾರಿ ಡಾ. ಪ್ರೇಮಾನಂದ (ಮೊ.ನಂ: 9972500235) ಇವರನ್ನು ನೇಮಕ ಮಾಡಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಬಿ.ಸದಾಶಿವ ಪ್ರಭು ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News