ಸಾಗರ ತಹಶಿಲ್ದಾರ್ ರ ಅತ್ತೆ ನಿಧನ: ಪಿಎಫ್ಐಯಿಂದ ಅಂತ್ಯಸಂಸ್ಕಾರ

Update: 2021-05-16 05:56 GMT

ಸಾಗರ : ತಾಲ್ಲೂಕು ದಂಡಾಧಿಕಾರಿ ಚಂದ್ರಶೇಖರ್ ನಾಯ್ಕ್ ಅವರ (ಪತ್ನಿಯ ತಾಯಿ) ಅತ್ತೆ, ಇಂದು ಅವರ ಮನೆಯಲ್ಲಿ ನಿಧನ ಹೊಂದಿದ್ದಾರೆ.

ಸೀತಮ್ಮ (81), ತಾಲ್ಲೂಕಿನ ಯಲಗಳಲೆ ಗ್ರಾಮದ ನಿವಾಸಿಯಾಗಿದ್ದು, ಕಳೆದ ಒಂದು ತಿಂಗಳಿಂದ ಸೀತಮ್ಮ ಅನಾರೋಗ್ಯಕ್ಕೀಡಾಗಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಮನೆಗೆ ಮರಳಿದ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಮೃತರ ಅಂತ್ಯಕ್ರಿಯೆಯನ್ನು ಪಿಎಫ್ಐ ಹಾಗೂ ಎಸ್ಡಿಪಿಐ ಕಾರ್ಯಕರ್ತರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News