ನಿರಂತರ ಮಳೆ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ರದ್ದು

Update: 2021-05-16 14:49 GMT

ಬೆಳಗಾವಿ, ಮೇ 16: ತೌಕ್ತೆ ಚಂಡಮಾರುತ ಪರಿಣಾಮ ಜೋರು ಗಾಳಿ ಸಮೇತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ.

ಪ್ರತಿಕೂಲ ವಾತಾವರಣ ಇರುವುದರಿಂದ ಹೈದರಾಬಾದ್ ಹಾಗೂ ತಿರುಪತಿ ವಿಮಾನಗಳ ಹಾರಾಟ ರದ್ದಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ವಿಮಾನಗಳ ಹಾರಾಟದ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News