ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Update: 2021-05-16 16:02 GMT

ಬ್ರಹ್ಮಾವರ, ಮೇ 16: ಮಾನಸಿಕ ಖಿನ್ನತೆಯಿಂದ ಆಶ್ರಮದಲ್ಲಿ ಆಶ್ರಯ ಪಡೆದುಕೊಂಡಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಬ್ರಹ್ಮಾವರದಲ್ಲಿ ನಡೆದಿದೆ.

ಮೃತರನ್ನು ಹಿರಿಯಡ್ಕ ಕೋಡಿಬೆಟ್ಟು ನಿವಾಸಿ ದಾಕ್ಷಾಯಿಣಿ(47) ಎಂದು ಗುರುತಿಸಲಾಗಿದೆ.

ಮದುವೆಯಾಗದ ಚಿಂತೆಯಲ್ಲಿ ಮಾನಸಿಕ ಖಿನ್ನೆತೆಗೆ ಒಳಗಾಗಿದ್ದರು ಎನ್ನಲಾಗಿದ್ದು, ಕಳೆದ 5 ತಿಂಗಳಿಂದ ಬ್ರಹ್ಮಾವರ ಆಕಾಶವಾಣಿ ಹತ್ತಿರ ಇರುವ ಅಪ್ಪ-ಅಮ್ಮ ಅನಾಥಾಲಯದಲ್ಲಿ ಆಶ್ರಯ ಪಡೆಯುತ್ತಿದ್ದರು. ಜೀವನ ದಲ್ಲಿ ಜಿಗುಪ್ಸೆಗೊಂಡ ಇವರು, ಆಶ್ರಮದ ಪಕ್ಕದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News