ರಾಜ್ಯದಲ್ಲಿಂದು ಕೊರೋನ ಸೋಂಕಿಗೆ 403 ಮಂದಿ ಮೃತ್ಯು: 31 ಸಾವಿರ ಪ್ರಕರಣಗಳು ದೃಢ

Update: 2021-05-16 16:07 GMT

ಬೆಂಗಳೂರು, ಮೇ 16: ರಾಜ್ಯದಲ್ಲಿ ರವಿವಾರ 31,531 ಹೊಸ ಕೋವಿಡ್ ಪ್ರಕರಣ ದೃಢಪಟ್ಟಿದ್ದು, 403ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 36,475 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯಾದ್ಯಂತ ಒಟ್ಟು 6,00,147 ಸಕ್ರಿಯ ಪ್ರಕರಣಗಳಿದ್ದು, ಅವರೆಲ್ಲರೂ ಆಸ್ಪತ್ರೆ, ಆರೈಕೆ ಕೇಂದ್ರ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

403 ಮಂದಿ ಸಾವು: ರಾಜ್ಯಾದ್ಯಂತ ರವಿವಾರ 403 ಮಂದಿ ಸಾವನ್ನಪಿದ್ದಾರೆ. ಅದರಲ್ಲಿ ಬಾಗಲಕೋಟೆ 2, ಬಳ್ಳಾರಿ 26, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 143, ಬೀದರ್ 6,  ಚಾಮರಾಜನಗರ 8, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 3, ಚಿತ್ರದುರ್ಗ 4,  ದಕ್ಷಿಣ ಕನ್ನಡ 7, ದಾವಣಗೆರೆ 1, ಧಾರವಾಡ 9, ಗದಗ 4, ಹಾಸನ 18, ಹಾವೇರಿ 11, ಕಲಬುರಗಿ 10, ಕೊಡಗು 8, ಕೋಲಾರ 6, ಕೊಪ್ಪಳ 11, ಮಂಡ್ಯ 15, ಮೈಸೂರು 8, ರಾಯಚೂರು 4, ರಾಮನಗರ 5, ಶಿವಮೊಗ್ಗ 14, ತುಮಕೂರು 11, ಉಡುಪಿ 5, ಉತ್ತರಕನ್ನಡ 24,  ವಿಜಯಪುರ 9, ಹಾಗೂ ಯಾದಗಿರಿ 4  ಸಾವಿನ ಪ್ರಕರಣಗಳು ವರದಿಯಾಗಿದೆ.

ಸೋಂಕಿತ ಪ್ರಕರಣಗಳು: ರಾಜ್ಯದಲ್ಲಿ ರವಿವಾರ 31,531 ಸೋಂಕಿತ ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 431, ಬಳ್ಳಾರಿ 1,729, ಬೆಳಗಾವಿ 1,762, ಬೆಂಗಳೂರು ಗ್ರಾಮಾಂತರ 1,082 ಬೆಂಗಳೂರು ನಗರ 8,344, ಬೀದರ್ 129, ಚಾಮರಾಜನಗರ 440, ಚಿಕ್ಕಬಳ್ಳಾಪುರ 558, ಚಿಕ್ಕಮಗಳೂರು 963, ಚಿತ್ರದುರ್ಗ 640, ದಕ್ಷಿಣ ಕನ್ನಡ 957, ದಾವಣಗೆರೆ 1,155, ಧಾರವಾಡ937, ಗದಗ 453, ಹಾಸನ 1182, ಹಾವೇರಿ 184, ಕಲಬುರಗಿ 645, ಕೊಡಗು 191, ಕೋಲಾರ 569, ಕೊಪ್ಪಳ 617, ಮಂಡ್ಯ 709, ಮೈಸೂರು 1811, ರಾಯಚೂರು 464, ರಾಮನಗರ 403, ಶಿವಮೊಗ್ಗ 643, ತುಮಕೂರು 2,138, ಉಡುಪಿ 745, ಉತ್ತರಕನ್ನಡ 1087, ವಿಜಯಪುರ 330, ಯಾದಗಿರಿಜಿಲ್ಲೆಯಲ್ಲಿ 233 ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ 143 ಮಂದಿ ಸಾವು: ರಾಜಧಾನಿ ಬೆಂಗಳೂರಿನಲ್ಲಿ ರವಿವಾರ 8,344 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 143 ಸೋಂಕಿತರು ಮೃತಪಟ್ಟಿದ್ದಾರೆ.

13,612 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 3,61,380 ಸಕ್ರಿಯ ಪ್ರಕರಣಗಳಿದ್ದು, ಅವರೆಲ್ಲರು ಕೋವಿಡ್ ನಿಗದಿತ ಆಸ್ಪತ್ರೆಗಳು, ಆರೈಕೆ ಕೇಂದ್ರ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News