ಹರ್ಯಾಣ ಸಿಎಂ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಲಾಠಿಪ್ರಹಾರ
Update: 2021-05-16 17:22 GMT
ಚಂಡಿಗಡ, ಮೇ 16: ರಾಜ್ಯದ ಹಿಸ್ಸಾರ್ ಜಿಲ್ಲೆಯ ಹಾನ್ಸಿ ಪಟ್ಟಣದಲ್ಲಿ ರವಿವಾರ ಹರ್ಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರ ವಿರುದ್ಧ ಪ್ರತಿಭಟನೆಗಿಳಿದಿದ್ದ ರೈತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗ ನಡೆಸಿದರು.
ಖಟ್ಟರ್ ಅವರು ಕೋವಿಡ್ ಆಸ್ಪತ್ರೆಯ ಉದ್ಘಾಟನೆಗಾಗಿ ಹಿಸ್ಸಾರ್ ಜಿಲ್ಲೆಗೆ ಭೇಟಿ ನೀಡಿದ್ದರು. ಘಟನೆಯಲ್ಲಿ ಹಲವಾರು ರೈತರು ಗಾಯಗೊಂಡಿದ್ದಾರೆ.