ಬಾಗಲಕೋಟೆ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೈನುದ್ದೀನ್ ನಬಿವಾಲೆ ಕೊರೋನದಿಂದ ನಿಧನ

Update: 2021-05-16 18:01 GMT

ಬಾಗಲಕೋಟೆ, ಮೇ 16: ಬಾಗಲಕೋಟೆ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೈನುದ್ದೀನ್ ನಬಿವಾಲೆ(57) ಕೋವಿಡ್‍ಗೆ ಬಲಿಯಾಗಿದ್ದಾರೆ.

ಕೋವಿಡ್ ಸೋಂಕಿಗೆ ತುತ್ತಾಗಿ 10 ದಿನಗಳ ಹಿಂದೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ನಬಿವಾಲೆ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇದರಂತೆ ಇಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದರು.

ನಬಿವಾಲೆ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. ನವನಗರದ ಖಬರಸ್ಥಾನದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಬಾಗಲಕೋಟೆಯ ಮುಸ್ಲಿಂ ಸಮಾಜದ ಪ್ರಮುಖರಾಗಿದ್ದ ಮೈನುದ್ದೀನ್ ನಬಿವಾಲೆ, ಈ ಹಿಂದೆ ಬಾಗಲಕೋಟೆ ಅಂಜುಮನ್ ಸಂಸ್ಥೆಯ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News