ಎಸೆಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ: ಸಚಿವ ಸುರೇಶ್ ಕುಮಾರ್

Update: 2021-05-17 05:48 GMT

ಬೆಂಗಳೂರು, ಮೇ 17: ಕೋವಿಡ್-19 ತೀವ್ರ‌ವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿರುವ ಎಸೆಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು‌ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ‌ ಎಂದಿರುವ ಸಚಿವರು, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ‌ ವಿದ್ಯಾರ್ಥಿಗಳು‌ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು  ಸಚಿವರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News