ಮಂಗಳೂರು: ತೌಕ್ತೆ ಚಂಡಮಾರುತದ ಹಾನಿ ಬಗ್ಗೆ ಮಾಹಿತಿ ಪಡೆದ ಕಂದಾಯ ಸಚಿವ ಅಶೋಕ್

Update: 2021-05-17 10:14 GMT

ಮಂಗಳೂರು, ಮೇ 17: ತೌಕ್ತೆ ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ವ್ಯಾಪಕ ಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಮಂಗಳೂರಿಗೆ ಆಗಮಿಸಿ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಎನ್.ಎಂ.ಪಿ.ಟಿ.ಗೆ ಆಗಮಿಸಿದ ಸಚಿವರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಯ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಿಸಲಾದ ಕೋರಮಂಡಲ್ ಸರೆಂಡರ್ 9ನ ಸಿಬ್ಬಂದಿಯನ್ನು ಭೇಟಿಯಾದರು.

ಬಳಿಕ ಎನ್.ಎಂ.ಪಿ.ಟಿ. ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚಂಡಮಾರುತದ ಪರಿಣಾಮದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಚಿವರು ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಸಂಜೆ ಭೇಟಿ ನೀಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News