ಕೋವಿಡ್ ಪಾಸಿಟಿವ್ ಬಂದವರಿಗೆ ಚಿಕಿತ್ಸಾ ಸೌಲಭ್ಯಕ್ಕಾಗಿ ರೆಫರೆನ್ಸ್ ಅಧಿಕಾರಿಯ ನೇಮಕ
Update: 2021-05-17 13:53 GMT
ಉಡುಪಿ, ಮೇ 17:ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಕೋವಿಡ್ಗೆ ಪಾಸಿಟಿವ್ ಬಂದಿರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸಾ ಸೌಲಭ್ಯ ಪಡೆಯುವ ಬಗ್ಗೆ ರೆಫರೆನ್ಸ್ ನೀಡುವುದ್ದಕ್ಕಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ವಿಶೇಷ ಅಧಿಕಾರಿಯೊಬ್ಬರನ್ನು ನೇಮಿಸಿದ್ದಾರೆ.
ಪ್ರಸ್ತುತ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿಯಾಗಿರುವ ಡಾ.ಸುರೇಂದ್ರ ಚಿಂಬಳ್ಕರ್ (ಮೊಬೈಲ್ ನಂ.:9448911425)ಇವರನ್ನು ಕೋವಿಡ್-19 ಪಾಸಿಟಿವ್ ಬಂದಿರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸಾ ಸೌಲಭ್ಯ ಪಡೆಯುವ ಬಗ್ಗೆ ರೆಫರೆನ್ಸ್ ನೀಡುವ ಕಾರ್ಯಕ್ಕೆ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ ಎಂದು ಡಿಎಚ್ಓ ತಿಳಿಸಿದ್ದಾರೆ.