ಬೈಂದೂರು ಹೋಬಳಿ; ಫ್ಲೈಯಿಂಗ್ ಸ್ಕ್ವಾಡ್ ಬದಲಾವಣೆ

Update: 2021-05-17 16:41 GMT

ಉಡುಪಿ, ಮೇ 17: ಸರಕಾರದಿಂದ ಹೊರಡಿಸಲಾಗುವ ಆದೇಶಗಳನ್ನು ಜಿಲ್ಲೆಯಾದ್ಯಂತ ಕಾರ್ಯಗತಗೊಳಿಸುವ ಸಲುವಾಗಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳನ್ನು ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶ ವ್ಯಾಪ್ತಿಯಲ್ಲಿ ನೇಮಿಸಲಾಗಿದ್ದು, ಬೈಂದೂರು ಹೋಬಳಿಯ ಕೊಲ್ಲೂರು, ಹಳ್ಳಿಹೊಳೆ, ಕಾಲ್ತೂಡು, ಎಳಜಿತ್, ಜಡ್ಕಲ್, ಮುದೂರು, ಗೋಳಿಹೊಳೆ ವ್ಯಾಪ್ತಿಗೆ ಕೊಲ್ಲೂರು ವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯಕ್ ಮೊ.ನಂ: 9482134461 ಇವರನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಜಿ . ಜಗದೀಶ್ ಆದೇಶ ಹೊರಡಿಸಿದ್ದಾರೆ.

ನಿಯೋಜಿತ ಅಧಿಕಾರಿ ಸರಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಯಾವುದೇ ತರಹದ ಲೋಪಕ್ಕೆ ಅವಕಾಶವಿಲ್ಲದಂತೆ ಕರ್ತವ್ಯ ನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005 ಹಾಗೂ ಎಪಿಡೆಮಿಕ್ ಡಿಸೀಸಸ್ ರೆಗ್ಯುಲೇಷನ್ ಆ್ಯಕ್ಟ್‌ನಂತೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News