ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಆ್ಯಂಬುಲೆನ್ಸ್ ಹಸ್ತಾಂತರ

Update: 2021-05-17 17:20 GMT

ಮಂಗಳೂರು, ಮೇ 17: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾರ್ವಜನಿಕರ ಉಚಿತ ಸೇವೆಗಾಗಿ ಆಕ್ಸಿಜನ್ ಸಹಿತ ಆ್ಯಂಬುಲೆನ್ಸ್‌ನ್ನು ಸೇವಾಂಜಲಿ ಟ್ರಸ್ಟ್‌ಗೆ ಸೋಮವಾರ ಹಸ್ತಾಂತರಿಸಲಾಯಿತು.

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಆ್ಯಂಬುಲೆಬನ್ಸ್ ಕೀಯನ್ನು ಸೇವಾಂಜಲಿ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಶಾಸಕ ವೇದವ್ಯಾಸ ಕಾಮತ್‌ರಿಗೆ ನೀಡುವ ಮೂಲಕ ಚಾಲನೆ ನೀಡಿದರು.

ಕೋವಿಡ್‌ನ ಸಂದಿಗ್ಧ ಪರಿಸ್ಥಿತಿಯಲ್ಲಿ ಕಳೆದ ವರ್ಷವೇ ಬಹಳಷ್ಟು ಸೇವೆ ನೀಡಿದ್ದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಈ ಬಾರಿ ಸ್ವಂತ ಖರ್ಚಿನಿಂದ ಕುದ್ರೋಳಿಯ ಉಳ್ಳಾಲ ನರ್ಸಿಂಗ್ ಹೋಮನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ಜಿಲ್ಲಾಡಳಿತದ ಜತೆ ಮಾತುಕತೆ ನಡೆಸಿದ್ದಾರೆ. ಈಗ ನಮ್ಮ ಮನವಿ ಮೇರೆಗೆ ಬ್ಯಾಂಕ್ ವತಿಯಿಂದ ಆ್ಯಂಬುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ. ಪೊಲೀಸರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್, ಆಶಾ ಕಾರ್ಯಕರ್ತರಿಗೆ ತಲಾ ಏಳು ಸಾವಿರ ರೂ. ನೆರವು ನೀಡಿರುವುದು ಶ್ಲಾಘನೀಯ ಎಂದು ವೇದವ್ಯಾಸ ಕಾಮತ್ ಹೇಳಿದರು.

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ ಶಾಸಕರು ಜನಪರವಾಗಿ ಕೆಲಸ ಮಾಡುವಾಗ ಅವರ ಮನವಿಗೆ ಸ್ಪಂದಿಸಿ ಆ್ಯಂಬುಲೆನ್ಸ್ ನೀಡಿದ್ದೇವೆ. ಸಿಎಂ ನಿಧಿಗೆ ಐದು ಕೋಟಿ ರೂ. ನೆರವು ಹಾಗೂ ಆರೋಗ್ಯ ಇಲಾಖೆಗೆ ಮಂಗಳವಾರ ಐದು ಲಕ್ಷ ಮಾಸ್ಕ್ ಕೊಡಲಿದ್ದೇವೆ ಎಂದರು.

ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ರಾಜಾರಾಮ ಭಟ್ ಟಿ.ಜಿ., ಶಶಿಕುಮಾರ್ ರೈ ಬಾಲ್ಯೋಟ್ಟು, ವಾದಿರಾಜ ಶೆಟ್ಟಿ, ಸದಾಶಿವ ಉಳ್ಳಾಲ್, ಹರಿಶ್ಚಂದ್ರ, ಸಿಇಒ ರವೀಂದ್ರ ಬಿ., ಮಹಾಪ್ರಬಂಧಕ ಗೋಪಿನಾಥ್ ಭಟ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್, ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಪ್ರವೀಣ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್‌ನ ಹನುಮಂತ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News