ವಿದ್ಯುತ್ ಬಿಲ್ ಮನ್ನಾ ಮಾಡಲು ಕಾಂಗ್ರೆಸ್ ಮನವಿ

Update: 2021-05-17 17:23 GMT

ಮಂಗಳೂರು, ಮೇ 17: ಲಾಕ್‌ಡೌನ್ ಸಂದರ್ಭದ ವಿದ್ಯುಚ್ಛಕ್ತಿ ಬಿಲ್ಲನ್ನು ಮನ್ನಾ ಮಾಡಬೇಕು ಮತ್ತು ವಿದ್ಯುತ್ ಸರಬರಾಜು ಸಂಪರ್ಕವನ್ನು ಕಡಿತಗೊಳಿಸಬಾರದು ಎಂದು ಒತ್ತಾಯಿಸಿ ಮೆಸ್ಕಾಂ ಅಧಿಕಾರಿಗಳಿಗೆ ಮಾಜಿ ವಿಧಾನ ಪರಿಷತ್ ಸದಸ್ಯ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.

ಕೊರೋನ ಸಂದರ್ಭ ರಾಜ್ಯ ಸರಕಾರ ಲಾಕ್‌ಡೌನ್ ಮಾಡಿದುದರ ಪರಿಣಾಮ ಕಾರ್ಮಿಕರು, ಸಣ್ಣ ಉದ್ದಿಮೆದಾರರು ವಿದ್ಯುತ್ ಬಿಲ್ಲನ್ನು ಪಾವತಿ ಸಲು ಸಾಧ್ಯವಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ವಿದ್ಯುತ್ ಬಿಲ್‌ಲ್ ಪಾವತಿಸದ ಗ್ರಾಹಕರ ವಿದ್ಯುತ್ ಸರಬರಾಜನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News