ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಸಹೋದರ ಕೋವಿಡ್ ನಿಂದ ನಿಧನ

Update: 2021-05-18 07:34 GMT

ಹೊಸದಿಲ್ಲಿ: ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಅವರ ಸಹೋದರ ಜಿತೇಂದರ್ ಬಲ್ಯಾನ್ ಅವರು ದಿಲ್ಲಿಯ ಏಮ್ಸ್ ನಲ್ಲಿ ಮಂಗಳವಾರ ಕೋವಿಡ್-19 ಕಾರಣದಿಂದ ನಿಧನರಾದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯಲ್ಲಿ ಕೇಂದ್ರ ಸಚಿವರ ಸೋದರಸಂಬಂಧಿಯಾಗಿದ್ದ ಜಿತೇಂದರ್ ಬಲ್ಯಾನ್ ಅವರು ಮುಝಫ್ಫರ್ ನಗರ ಜಿಲ್ಲೆಯ ಕುಟ್ಬಾ ಗ್ರಾಮದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು.

ಚುನಾವಣಾ ಪ್ರಚಾರದ ಸಮಯದಲ್ಲಿ ಬಲ್ಯಾನ್ ಅವರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರು ಹಾಗೂ  ದಿಲ್ಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News