ಸಹಕಾರಿ ನೌಕರರನ್ನು ಫ್ರಂಟ್‌ಲೈನ್ ವಾರಿಯರ್ಸ್ ಘೋಷಿಸಲು ಮನವಿ

Update: 2021-05-18 14:33 GMT

ಉಡುಪಿ, ಮೇ 18: ಕೊರೋನದ ಸಂಕಷ್ಟದ ಕಾಲದಲ್ಲಿ ಸೇವೆ ಸಲ್ಲಿಸುತ್ತಿರುವ ಸಹಕಾರ ಸಂಘಗಳ ನೌಕರರನ್ನು ಫ್ರಂಟ್‌ಲೈನ್ ವಾರಿಯರ್ಸ್ ಎಂಬುದಾಗಿ ಪರಿಗಣಿಸುವಂತೆ ಹಾಗೂ ಪ್ರಥಮ ಪ್ರಾಶಸ್ಯ ನೀಡಿ ವ್ಯಾಕ್ಸಿನೇಷನ್ ಹಾಗೂ ವಿಮಾ ಭದ್ರತೆ ಒದಗಿಸುವಂತೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳಿಗೆ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಮನವಿ ಸಲ್ಲಿಸಿದ್ದಾರೆ.

ಉಡುಪಿ ಜಲ್ಲೆಯ ಸಮಸ್ತ ಸಹಕಾರಿಗಳ ಪರವಾಗಿ ಸಹಕಾರ ಸಚಿವ ಎಸ್. ಟಿ.ಸೋಮಶೇಖರ್, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ಉಡುಪಿ ಶಾಸಕ ರಘುಪತಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್, ಜಿಲ್ಲಾಧಿಕಾರಿ ಜಿ. ಜಗದೀಶ್ ಇವರಿಗೆ ಮನವಿಗಳನ್ನು ಸಲ್ಲಿಸ ಲಾಗಿದೆ. ಈ ಬಗ್ಗೆ ಜಿಟಿ ದೇವೇಗೌಡ ಅವರಲ್ಲಿ ದೂರವಾಣಿ ಮೂಲಕ ಮಾತುಕತೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News