ಉಡುಪಿ ಜಿಲ್ಲೆಯಲ್ಲಿ ಮೇ-ಜೂನ್ ತಿಂಗಳ ಪಡಿತರ ವಿತರಣೆ

Update: 2021-05-18 15:13 GMT

ಉಡುಪಿ, ಮೇ 18: ಜಿಲ್ಲೆಯಲ್ಲಿ ಕೋವಿಡ್ -19 ಹರಡುತ್ತಿರುವ ಹಿನ್ನೆಲೆಯಲ್ಲಿ ಎನ್‌ಎಫ್‌ಎಸ್‌ಎ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು ಪ್ರಸಕ್ತ ಸಾಲಿನ ಮೇ ಮತ್ತು ಜೂನ್ ತಿಂಗಳಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ವಿತರಿಸುವ ವ್ಯವಸ್ಥೆ ಮಾಡಲಾಗಿದ್ದು, ಆಹಾರಧಾನ್ಯದ ಪ್ರಮಾಣದ ವಿವರ ಕೆಳಕಂಡಂತಿದೆ.

ಜಿಲ್ಲೆಯಲ್ಲಿರುವ ಅಂತ್ಯೋದಯ (ಎಎವೈ) ಯೋಜನೆಯ 28,422 ಪಡಿತರ ಚೀಟಿದಾರರಿಗೆ ಉಚಿತವಾಗಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ವಿತರಿಸಲಾಗುತ್ತದೆ. ಆದ್ಯತಾ (ಬಿಪಿಎಲ್) ಯೋಜನೆಯ 1,64,636 ಪಡಿತರ ಚೀಟಿದಾರರಿಗೆ ಉಚಿತವಾಗಿ ಪ್ರತಿ ಯುನಿಟ್‌ಗೆ 5 ಕೆ.ಜಿ. ಅಕ್ಕಿ ಮತ್ತು ಪ್ರತಿ ಆದ್ಯತಾ ಕಾರ್ಡಿಗೆ 2ಕೆ.ಜಿ ಗೋಧಿ ಜೊತೆಗೆ ಪ್ರತಿ ಸದಸ್ಯರಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಎಪಿಎಲ್ (ಒಪ್ಪಿತ ಪಡಿತರ ಚೀಟಿ) ಯೋಜನೆಯ 28,323 ಪಡಿತರ ಚೀಟಿದಾರರಿಗೆ ಪ್ರತಿ ಕೆ.ಜಿ ಗೆ 15 ರೂ.ನಂತೆ ಏಕ ಸದಸ್ಯ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ ಮತ್ತು ಎರಡು ಅಥವಾ ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುತ್ತದೆ.

ಹೊಸದಾಗಿ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ರುವ ಫಲಾನುಭವಿಗಳಿಗೆ ಮೇ ಮತ್ತು ಜೂನ್ ತಿಂಗಳಿಗೆ ತಲಾ 10 ಕೆ.ಜಿ ಅಕ್ಕಿ ಯನ್ನು ಉಚಿತವಾಗಿ ಹಾಗೂ ಪಡಿತರಕ್ಕಾಗಿ ಒಪ್ಪಿಗೆ ಸೂಚಿಸಿರುವ ಆದ್ಯತೇತರ (ಎಪಿಎಲ್) ಪಡಿತರ ಚೀಟಿ ಅರ್ಜಿಗಳಿಗೆ ಪ್ರತಿ ಕೆ.ಜಿ.ಗೆ 15 ರೂ. ದರದಂತೆ ಪ್ರತಿ ಅರ್ಜಿಗೆ 10 ಕೆ.ಜಿ ಅಕ್ಕಿಯನ್ನು ಆಧಾರ್ ಆಧಾರಿತ ದೃಢೀಕರಣದ ಮೂಲಕ ವಿತರಿಸಲಾಗುವುದು.

ಅಂತರ್ ರಾಜ್ಯ ಅಥವಾ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರು ವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಪಡಿತರ ವಿತರಣೆ ಸಮಯದಲ್ಲಿ ಯಾವುದಾದರೂ ಸಮಸ್ಯೆ ಕಂಡುಬಂದಲ್ಲಿ ಉಡುಪಿ ತಾಲೂಕು ಕಚೇರಿಯ ಆಹಾರ ಶಿರಸ್ತೆದಾರರಾದ ಪಾರ್ವತಿ (ಮೊ.ನಂ: 9482027531), ಬ್ರಹ್ಮಾವರ ತಾಲೂಕು ಕಚೇರಿಯ ಆಹಾರ ನಿರೀಕ್ಷಕಿ ವೌನ (ಮೊ.ನಂ:9742276430), ಕಾಪು ತಾಲೂಕು ಕಚೇರಿಯ ಆಹಾರ ನಿರೀಕ್ಷಕ ಲೀಲಾನಂದ (ಮೊ.ನಂ: 9448544447), ಕುಂದಾಪುರ ತಾಲೂಕು ಕಚೇರಿ ಆಹಾರ ನಿರೀಕ್ಷಕ ಸುರೇಶ್ ಕುಮಾರ್ (ಮೊ.ನಂ: 9845169489), ಬೈಂದೂರು ತಾಲೂಕು ಕಚೇರಿಯ ಆಹಾರ ನಿರೀಕ್ಷಕ ವಿನಯ ಕುಮಾರ್ (ಮೊ.ನಂ: 7406930566), ಕಾರ್ಕಳ ತಾಲೂಕು ಕಚೇರಿಯ ಆಹಾರ ನಿರೀಕ್ಷಕಿ ಆಶಾ (ಮೊ.ನಂ:7353913722) ಮತ್ತು ಸುಮತಿ (ಮೊ.ನಂ: 9008819733), ಹೆಬ್ರಿ ತಾಲೂಕು ಕಚೇರಿಯ ಆಹಾರ ನಿರೀಕ್ಷಕ ಗುರುಪ್ರಸಾದ್ (ಮೊ.ನಂ:9900410367) ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ ದೂ.ಸಂಖ್ಯೆ: 0820-2574947ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News