ಬೈಕ್ ಢಿಕ್ಕಿ: ವೃದ್ಧ ಸಾವು

Update: 2021-05-20 16:25 GMT

ಹೆಬ್ರಿ, ಮೇ 20: ಮೋಟಾರು ಸೈಕಲ್ ಒಂದು ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತಿದ್ದ ವೃದ್ಧರೊಬ್ಬರು ಮೃತಪಟ್ಟ ಘಟನೆ ವರಂಗ ಗ್ರಾಮದ ಮುನಿಯಾಲ್‌ನಲ್ಲಿ ನಡೆದಿದೆ. ಮೃತರನ್ನು ರಾಮಣ್ಣ ಶೆಟ್ಟಿ (76) ಎಂದು ಗುರುತಿಸಲಾಗಿದೆ.

ರಾಮಣ್ಣ ಶೆಟ್ಟಿ ಅವರು ಇಂದು ಬೆಳಗ್ಗೆ 8:40ರ ಸುಮಾರಿಗೆ ಮುನಿಯಾಲ್ ಕಡೆಗೆ ಕಚ್ಛಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿತ್ತು. ಇದರಿಂದ ಕೆಳಗೆ ಬಿದ್ದು ತೀವ್ರ ಸ್ವರೂಪದ ಗಾಯಗಳಾದ ಶೆಟ್ಟಿ ಅವರನ್ನು ಚಿಕಿತ್ಸೆಗಾಗಿ ಮುನಿಯಾಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಾಗ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News