×
Ad

ಲಾಕ್‍ಡೌನ್ ಹಿನ್ನೆಲೆ: ಚಿತ್ರರಂಗಕ್ಕೂ ಪ್ಯಾಕೇಜ್ ಘೋಷಿಸುವಂತೆ ಸಿಎಂಗೆ ಮನವಿ

Update: 2021-05-21 17:55 IST

ಬೆಂಗಳೂರು, ಮೇ 21: ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಹಿನ್ನೆಲೆಯಲ್ಲಿ ವಿವಿಧ ಸಮುದಾಯಗಳಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿದ ಮಾದರಿಯಲ್ಲಿ ಚಿತ್ರರಂಗಕ್ಕೂ ಪ್ಯಾಕೇಜ್ ಪ್ರಕಟಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಕಾರ್ಯದರ್ಶಿ ಭಾ.ಮ.ಹರೀಶ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ ಚಿತ್ರನಟ ಜೆಕೆ, ನಿರ್ದೇಶಕ ಆಸ್ಕರ್‍ಕೃಷ್ಣ ಅವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚಿತ್ರರಂಗದ ಪರವಾಗಿ ಮನವಿ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಹಾಗೂ ಲಾಕ್‍ಡೌನ್ ಜಾರಿಯಿಂದಾಗಿ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ, ಕಷ್ಟದಲ್ಲಿರುವ ಜನರಿಗೆ ಸರಕಾರ ಆರ್ಥಿಕ ಪ್ಯಾಕೇಜ್ ಪ್ರಕಟಿಸಿದೆ.

ಅದೇ ರೀತಿಯಲ್ಲಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ವಿವಿಧ ವಿಭಾಗಗಳು ಪ್ಯಾಕೇಜ್ ಪ್ರಕಟಿಸಿ ಎಂದು ಮನವಿ ಸಲ್ಲಿಸಿದ್ದಾರೆ. ಸರಕಾರ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ವಿವಿಧ ವಿಭಾಗಗಳ ಜನರಿಗೆ ಪ್ಯಾಕೇಜ್ ಪ್ರಕಟಿಸುವ ಮೂಲಕ ಸಂಕಷ್ಟದಲ್ಲಿರುವ ಚಿತ್ರರಂಗದ ಮಂದಿಗೆ ನೆರವಾಗುವಂತೆ ಭಾ.ಮ.ಹರೀಶ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News