ಬೈಕಂಪಾಡಿ: ಲಾರಿ ಢಿಕ್ಕಿ; ಸೈಕಲ್ ಸವಾರ ಸ್ಥಳದಲ್ಲೇ ಮೃತ್ಯು
Update: 2021-05-21 18:55 IST
ಮಂಗಳೂರು, ಮೇ 21: ರಾ.ಹೆ.ಯ ಬೈಕಂಪಾಡಿಯಲ್ಲಿ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮೃತ ಸೈಕಲ್ ಸವಾರನನ್ನು ಮಧು ಕೆ. ಎಂದು ಗುರುತಿಸಲಾಗಿದೆ. ಈತ ಹೈ ರೇಂಜ್ ಸೆಕ್ಯುರಿಟಿ ಸರ್ವಿಸಸ್ನ ಉದ್ಯೋಗಿ ಎಂದು ತಿಳಿದುಬಂದಿದೆ.
ಶುಕ್ರವಾರ ಸಂಜೆ ಈತ ಸೈಕಲ್ನಲ್ಲಿ ತೆರಳುತ್ತಿದ್ದಾಗ ಅತೀ ವೇಗ ಮತ್ತು ಅಜಾಗರೂಕತೆಯಿಂದ ಧಾವಿಸಿ ಬಂದ ಲಾರಿ ಢಿಕ್ಕಿ ಹೊಡೆಯಿತು ಎನ್ನಲಾಗಿದ್ದು, ಇದರಿಂದ ಸೈಕಲ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.