ದಲಿತ ಯುವಕನ ಮೇಲೆ ದೌರ್ಜನ್ಯ ಆರೋಪ: ಪಿಎಸ್ಸೈ ವಿರುದ್ಧ ಕ್ರಮಕ್ಕೆ ದಿನೇಶ್ ಗುಂಡೂರಾವ್ ಆಗ್ರಹ

Update: 2021-05-23 11:45 GMT

ಬೆಂಗಳೂರು, ಮೇ 23: ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿದ ಆರೋಪ ಹಿನ್ನೆಲೆ ಮೂಡಿಗೆರೆ ಠಾಣೆ ಪಿಎಸ್ಸೈ ವಿರುದ್ಧ ಕ್ರಮಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ರವಿವಾರ ಈ ಕುರಿತು ಟ್ವೀಟ್ ಮಾಡಿರುವ ಅವರು, ಮೂಡಿಗೆರೆಯ ಗೋಣಿಬೀಡಿನ ಯುವಕನ ಬಾಯಿಗೆ ಠಾಣೆಯ ಪಿಎಸ್ಸೈ ಮೂತ್ರ ಸುರಿದಿರುವ ಘಟನೆ ಅಮಾನವೀಯ ಮತ್ತು ಹೇಯ ಕೃತ್ಯ ಎಂದು ಹೇಳಿದ್ದಾರೆ.

ನಾಗರಿಕ ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಅಲ್ಲಿನ ಎಸ್ಪಿ ಹಾಗೂ ಈ ಹೇಯ ಕೃತ್ಯ ಎಸಗಿದ ಪಿಎಸ್ಸೆ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News