ಎಂಆರ್‌ಪಿಎಲ್‌ ನಲ್ಲಿ ಕನ್ನಡಿಗರ ಕಡೆಗಣನೆ: ನೇಮಕಾತಿ ತಡೆಹಿಡಿಯಲು ಕಾಂಗ್ರೆಸ್ ಆಗ್ರಹ

Update: 2021-05-24 11:30 GMT

ಬೆಂಗಳೂರು, ಮೇ 24: `ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಆದ್ಯತೆ ನೀಡಬೇಕಾದ ನಿಯಮವನ್ನು ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಸಂಸ್ಥೆಯ ನೇಮಕಾತಿಯಲ್ಲಿ ಗಾಳಿಗೆ ತೂರಲಾಗಿದೆ, 400ರಲ್ಲಿ ಕೇವಲ 10 ಮಂದಿ ಕನ್ನಡಿಗರಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗಿದೆ, ಇದು ಖಂಡನೀಯ. ಈ ನೇಮಕಾತಿಯನ್ನು ತಡೆಹಿಡಿಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, `ಈ ನೇಮಕಾತಿ ಆದೇಶವನ್ನು ತಡೆಹಿಡಿದು ಕನ್ನಡಿಗರಿಗೆ ಆದ ಅನ್ಯಾಯವನ್ನು ಸರಿಪಡಿಸಿ ಸರೋಜಿನಿ ಮಹಿಷಿ ವರದಿಯಂತೆ ಕನ್ನಡಿಗರಿಗೆ ಔದ್ಯೋಗಿಕ ನ್ಯಾಯವನ್ನು ಒದಗಿಸಬೇಕು ಎಂದು ಕೇಂದ್ರ ಸರಕಾರವನ್ನು ಹಾಗೂ ಕನ್ನಡಿಗರಿಗೆ ನ್ಯಾಯ ಒದಗಿಸಬೇಕೆಂದು ರಾಜ್ಯದವರೇ ಅದ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರನ್ನ ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News