ಲಕ್ಷಣ್ ಶೆಟ್ಟಿಗಾರ್
Update: 2021-05-25 13:04 GMT
ಉಡುಪಿ, ಮೇ 25: ಮಣಿಪಾಲ ಸರಳಬೆಟ್ಟು ನಿವಾಸಿ ಸಾಮಾಜಿಕ ಕಾರ್ಯಕರ್ತ, ಆರ್ಎಸ್ಎಸ್ ಮುಖಂಡ, ಉದ್ಯಮಿ ಲಕ್ಷ್ಮಣ್ ಶೆಟ್ಟಿಗಾರ್(59) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಸೋಮವಾರ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ ನಾಯಕ್ ಕುಯಿಲಾಡಿ, ನಗರ ಅಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಸಂತಾಪ ವ್ಯಕ್ತ ಪಡಿಸಿದ್ದಾರೆ.