ದ.ಕ ಜಿಲ್ಲೆಯಲ್ಲಿ ಬುಧವಾರ ಕೋವಿಡ್‌ಗೆ 11 ಮಂದಿ ಬಲಿ; 729 ಮಂದಿಗೆ ಸೋಂಕು ದೃಢ

Update: 2021-05-26 16:56 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಮೇ 26: ದ.ಕ. ಜಿಲ್ಲೆಯಲ್ಲಿ ಬುಧವಾರ 11 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 884ಕ್ಕೇರಿದೆ. ಮೃತಪಟ್ಟವರಲ್ಲಿ ಮಂಗಳೂರಿನ 9, ಬಂಟ್ವಾಳ ಮತ್ತು ಪುತ್ತೂರಿನ ತಲಾ ಒಬ್ಬರು ಸೇರಿದ್ದಾರೆ. ಅಲ್ಲದೆ ಬುಧವಾರ ಜಿಲ್ಲೆಯಲ್ಲಿ 729 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ.

ಜಿಲ್ಲೆಯಲ್ಲಿ ಈವರಗೆ 8,35,152 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,62,608 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು 72,544 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ.

ಬುಧವಾರ 756 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗುವುದರೊಂದಿಗೆ ಈವರೆಗೆ ಗುಣಮುಖರಾದವರ ಸಂಖ್ಯೆ 61,561ಕ್ಕೇರಿದೆ.

ಸದ್ಯ ಜಿಲ್ಲೆಯಲ್ಲಿ 10,099 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಸಿದ 56,739 ಮಂದಿಯಿಂದ 59,22,830 ರೂ. ದಂಡ ವಸೂಲು ಮಾಡಲಾಗಿದೆ.

5 ಕಡೆ ಕಂಟೈನ್ಮೆಂಟ್ ವಲಯ: ಜಿಲ್ಲೆಯ 5 ಕಡೆಗಳಲ್ಲಿ ಬುಧವಾರ ಕಂಟೈನ್ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಮಂಗಳೂರು ತಾಲೂಕಿನ 4 ಮತ್ತು ಬಂಟ್ವಾಳ ತಾಲೂಕಿನ 1 ಕಡೆಗಳಲ್ಲಿ ಕಂಟೈನ್ಮೆಂಟ್ ವಲಯ ಘೆಷಣೆ ಮಾಡಲಾಗಿದೆ.

ಬ್ಲ್ಯಾಕ್ ಫಂಗಸ್ ಪ್ರಕರಣ: ಜಿಲ್ಲೆಯಲ್ಲಿ ಬುಧವಾರ 2 ಬ್ಲ್ಯಾಕ್ ಂಗಸ್ ಪ್ರಕರಣ ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ 25 ಬ್ಲ್ಯಾಕ್ ಂಗಸ್ ಸಕ್ರಿಯ ಪ್ರಕರಣಗಳು ಇದೆ. ಈ ಪ್ರಕರಣದಲ್ಲಿ ಈಗಾಗಲೆ ಇಬ್ಬರು ಮೃತಪಟ್ಟಿದ್ದಾರೆ.

ಬುಧವಾರ ಪತ್ತೆಯಾದ 2 ಪ್ರಕರಣಗಳಲ್ಲಿ ವೆನ್ಲಾಕ್‌ನಲ್ಲಿ ಒಬ್ಬರು ಮತ್ತು ಖಾಸಗಿ ಆಸ್ಪತ್ರೆಯೊಂದರಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ವೈಟ್ ಹಾಗೂ ಯೆಲ್ಲೊ ಫಂಗಸ್ ಪ್ರಕರಣಗಳು ಕಾಲಿಟ್ಟಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News