ಚಂದ್ರಶೇಖರ ರಾವ್

Update: 2021-05-28 16:17 GMT

ಉಡುಪಿ: ಬಂಟ್ವಾಳ ತಾಲೂಕಿನ ಇರಾ ನಿವಾಸಿ ನಿವೃತ್ತ ಅಧ್ಯಾಪಕ ಬಿ. ಚಂದ್ರಶೇಖರ್ ರಾವ್ (88) ಗುರುವಾರ ನಿಧನ ಹೊಂದಿದರು.

ಯಕ್ಷಗಾನ ಕಲಾ ವಿಕಾಸ ಸಂಘ ಮಂಚಿ ಇದರ ಸ್ಥಾಪಕರಾಗಿ 30 ವರ್ಷ ತಾಳಮದ್ದಳೆಗಳನ್ನು ನಡೆಸಿಕೊಟ್ಟಿದ್ದಾರೆ. ಸಂಘಟಕ, ಅರ್ಥಧಾರಿ, ಹವ್ಯಾಸಿ ಕಲಾವಿದರಾಗಿದ್ದ ಇವರನ್ನು ಸಂಸ್ಥೆ 2018ನೇ ಸಾಲಿನ ಮಟ್ಟಿಮುರಲೀಧರ ರಾವ್ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿದೆ.‌ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ