ರಾಜ್ಯದಲ್ಲಿಂದು 20 ಸಾವಿರ ಮಂದಿಗೆ ಕೊರೋನ ದೃಢ: 28 ಸಾವಿರ ಸೋಂಕಿತರು ಗುಣಮುಖ
ಬೆಂಗಳೂರು, ಮೇ 30: ರಾಜ್ಯದಲ್ಲಿ ರವಿವಾರ 20,378 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 382 ಜನರು ಸೋಂಕಿಗೆ ಬಲಿಯಾಗಿದ್ದು, 28,053 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 25,87,827ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 28,679ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 342010ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
382 ಸೋಂಕಿತರು ಬಲಿ: ಬಾಗಲಕೋಟೆ 2, ಬಳ್ಳಾರಿ 13, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 213, ಬೀದರ್ 2, ಚಾಮರಾಜನಗರ 5, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ದಾವಣಗೆರೆ 8, ಧಾರವಾಡ 19, ಗದಗ 5, ಹಾಸನ 11, ಹಾವೇರಿ 10, ಕಲಬುರಗಿ 4, ಕೊಡಗು 3, ಕೋಲಾರ 3, ಕೊಪ್ಪಳ 5, ಮಂಡ್ಯ 4, ಮೈಸೂರು 8, ರಾಯಚೂರು 3, ರಾಮನಗರ 3, ಶಿವಮೊಗ್ಗ 12, ತುಮಕೂರು 8, ಉಡುಪಿ 2, ಉತ್ತರ ಕನ್ನಡ 7, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 20,378 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 193, ಬಳ್ಳಾರಿ 598, ಬೆಳಗಾವಿ 1,171, ಬೆಂಗಳೂರು ಗ್ರಾಮಾಂತರ 392, ಬೆಂಗಳೂರು ನಗರ 4,734, ಬೀದರ್ 37, ಚಾಮರಾಜನಗರ 402, ಚಿಕ್ಕಬಳ್ಳಾಪುರ 356, ಚಿಕ್ಕಮಗಳೂರು 671, ಚಿತ್ರದುರ್ಗ 805, ದಕ್ಷಿಣ ಕನ್ನಡ 727, ದಾವಣಗೆರೆ 698, ಧಾರವಾಡ 525, ಗದಗ 289, ಹಾವೇರಿ 206, ಕಲಬುರಗಿ 107, ಕೊಡಗು 271, ಕೋಲಾರ 341, ಕೊಪ್ಪಳ 365, ಮಂಡ್ಯ 643, ಮೈಸೂರು 1,559, ರಾಯಚೂರು 278, ರಾಮನಗರ 164, ಶಿವಮೊಗ್ಗ 386, ತುಮಕೂರು 773, ಉಡುಪಿ 651, ಉತ್ತರ ಕನ್ನಡ 504, ವಿಜಯಪುರ 198, ಯಾದಗಿರಿ ಜಿಲ್ಲೆಯಲ್ಲಿ 107 ಪ್ರಕರಣಗಳು ಪತ್ತೆಯಾಗಿವೆ.
ರಾಜಧಾನಿಯಲ್ಲಿ 213 ಜನರು ಸಾವು
ರಾಜಧಾನಿಯಲ್ಲಿ ರವಿವಾರದಂದು 4,734 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 213 ಜನರು ಮೃತಪಟ್ಟಿದ್ದಾರೆ. 6,078 ಸೋಂಕಿತರು ಬಿಡುಗಡೆಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 11,59,237 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 13,104 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 9,83,507 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.