ಎ. ದೇವದಾಸ್

Update: 2021-05-30 15:20 GMT

ಮಂಗಳೂರು, ಮೇ 30: ನಗರದ ಮಣ್ಣಗುಡ್ಡ ನಿವಾಸಿ ಕೆನರಾ ಕಾಲೇಜಿನ ನಿವೃತ್ತ ಉದ್ಯೋಗಿ ಎಂ.ದೇವದಾಸ್ (65) ರವಿವಾರ ನಗರದ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದ ಅವರು ಕಂಬ್ಳ ವಾರ್ಡ್‌ನಿಂದ ಮಂಗಳೂರು ಮಹಾನಗರ ಪಾಲಿಕೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಳಿಕ ಅವರು ಎಡಪಕ್ಷಗಳ ಅಧೀನದ ಸಂಘಟನೆಗಳಲ್ಲಿ ತೊಡಗಿಸಿ ಕೊಂಡು ಕೋಮು ಸೌಹಾರ್ದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು.

ಮಂಗಳೂರಿನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಹಿರಿಯ ಸದಸ್ಯರಾಗಿದ್ದ ಅವರು ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯಲ್ಲಿಯೂ ಸಕ್ರಿಯರಾಗಿದ್ದರು. ಎಲ್ಐಸಿ ಏಜೆಂಟ್ ಆಗಿದ್ದರಿಂದ ಅವರನ್ನು ಎಲ್‌ಐಸಿ ದೇವದಾಸ್ ಎಂದೂ ಜನರು ಕರೆಯುತ್ತಿದ್ದರು. ಎಲ್ಐಸಿ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ