ಎನ್. ಮಹಮ್ಮದ್ ಹಾಜಿ

Update: 2021-05-30 16:40 GMT

ಪುತ್ತೂರು: ಬಂಟ್ವಾಳ ತಾಲೂಕಿನ ಪಕಳಕುಂಜ ಸಮೀಪದ ನಾಯರ್ ಮೂಲೆ ನಿವಾಸಿ ನಿವೃತ್ತ ಪೋಸ್ಟ್‌ ಮಾಸ್ಟರ್ ಮಹಮ್ಮದ್ ಹಾಜಿ (85) ಅವರು ಅಲ್ಪ ಕಾಲದ ಅಸೌಖ್ಯದಿಂದ ರವಿವಾರ ಸ್ವಗೃಹದಲ್ಲಿ ‌ನಿಧನರಾದರು.

ಮುರುವ ಅಂಚೆ ಕಚೇರಿಯಲ್ಲಿ ಪೋಸ್ಟ್‌ ಮಾಸ್ಟರ್ ಆಗಿದ್ದು, ನಿವೃತ್ತ ರಾಗಿದ್ದ ಅವರು ರಾಜಕೀಯ ಮತ್ತು ಧಾರ್ಮಿಕ ನೇತಾರರಾಗಿದ್ದರು. ನಿವೃತ್ತಿ ಬಳಿಕ ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದರು.

ನಾಯರ್ ಮೂಲೆ ಮಸೀದಿಯಲ್ಲಿ 40 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಪೆರುವಾಯಿ ಗ್ರಾಮ ಪಂಚಾಯತಿ ಸದಸ್ಯರಾಗಿ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ಮೃತರು ದ.ಕ.ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಬದ್ರುದ್ದೀನ್ ಸಹಿತ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ