×
Ad

ಸೀಡಿ ಪ್ರಕರಣ: ಮಗಳನ್ನು ಹುಡುಕಿಕೊಡುವಂತೆ ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ ಯುವತಿಯ ತಂದೆ

Update: 2021-05-31 17:37 IST

ಧಾರವಾಡ, ಮೇ 31: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಸಂಬಂಧ ಧಾರವಾಡ ಹೈಕೋರ್ಟ್‍ಗೆ ಯುವತಿಯ ತಂದೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಮೇ 27ರಂದು ಯುವತಿಯ ತಂದೆ ಮಗಳನ್ನು ಹುಡುಕಿಕೊಡಿ ಎಂದು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. 

ಸೀಡಿ ಪ್ರಕರಣ ಬೆಳಕಿಗೆ ಬಂದ ನಂತರ ಸಂತ್ರಸ್ತೆ ಸಾಕಷ್ಟು ಸುದ್ದಿಯಲ್ಲಿದ್ದರು. ಇದೀಗ ಈ ಪ್ರಕರಣ ಮತ್ತೊಂದು ಹೊಸ ತಿರುವು ಪಡೆದಿದೆ. ತಮ್ಮ ಮಗಳು ಕಳೆದ ಕೆಲ ತಿಂಗಳಿಂದ ಕಾಣೆಯಾಗಿದ್ದು, ಆಕೆಯನ್ನು ಹುಡುಕಿಕೊಡುವಂತೆ ಯುವತಿಯ ತಂದೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಧಾರವಾಡ ಹೈಕೋರ್ಟ್ ಪೀಠದ ಮುಂದೆ ಸಂತ್ರಸ್ತ ಯುವತಿಯ ತಂದೆ ಪ್ರಕಾಶ ಕಂಚೇರಿ ಎಂಬವರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News