ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೆಡಿಕಲ್ ಕಿಟ್ ಹಸ್ತಾಂತರ

Update: 2021-06-01 12:31 GMT

 ಬೈಂದೂರು, ಜೂ.1: ಸುಮುಖ ಸರ್ಜಿಕಲ್ಸ್ ವತಿಯಿಂದ ಕೊಡಮಾಡಿದ ಸುಮಾರು 1.50 ಲಕ್ಷ ಮೌಲ್ಯದ ಪಿಪಿಇ ಕಿಟ್, ಫೇಸ್‌ಶೀಲ್ಡ್, ಮಾಸ್ಕ್, ಸ್ಯಾನಿಟೈಸರ್, ಪಲ್ಸ್ ಆಕ್ಸೀಮೀಟರ್, ವಿಟಮಿನ್ ಮಾತ್ರೆ ಸೇರಿದಂತೆ ಇತರ ವೈದ್ಯಕೀಯ ಪರಿಕರ ಗಳನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ನೀಡಲಾಯಿತು.

ಈ ಪರಿಕರಗಳನ್ನು ಕೇಂದ್ರದ ವೈದ್ಯಾಧಿಕಾರಿ ಡಾ.ನಂದಿನಿ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಸ್ತಾಂತರಿಸಿದರು. ಈ ಸಂದರ್ಭ ದಲ್ಲಿ ಬಿಜೆಪಿ ಮುಖಂಡ ಹಾಗೂ ಸಂಸ್ಥೆಯ ಬಿ.ಎಸ್.ಸುರೇಶ್ ಶೆಟ್ಟಿ ಮತ್ತು ಪಾಂಡುರಂಗ ಪಡಿಯಾರ್, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನ ಕುದ್ರು, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಅತ್ರಾಡಿ, ಪಕ್ಷದ ಪ್ರಮುಖರಾದ ಬಿ.ಎಸ್.ಸುರೇಶ್ ಶೆಟ್ಟಿ, ಪಾಂಡುರಂಗ ಪಡಿಯಾರ್, ಜಿಪಂ ಸದಸ್ಯ ಸುರೇಶ್ ಬಟಾವಾಡಿ, ಜಗನ್ನಾಥ್, ನಾಗರಾಜ್ ಖಾರ್ವಿ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News