ನಕಲಿ ಬಿಲ್ ಸೃಷ್ಟಿಸಿ 4 ಕೋಟಿ ರೂ. ಬಿಡುಗಡೆ, ಅಧಿಕಾರಿಗಳ ವಿರುದ್ಧ ದೂರು: ಎನ್.ಆರ್.ರಮೇಶ್

Update: 2021-06-02 17:23 GMT

ಬೆಂಗಳೂರು, ಜೂ. 2: ಕಾಮಗಾರಿ ನಡೆಸದೆ ನಕಲಿ ಬಿಲ್ ಸೃಷ್ಟಿಸಿ 4 ಕೋಟಿ ರೂ. ಹಣ ಬಿಡುಗಡೆ ಮಾಡಿರುವ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ತಿಳಿಸಿದರು.

ಬುಧವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಪ್ರತಿನಿಧಿಸುವ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಎರಡು ವಾರ್ಡ್‍ಗಳಲ್ಲಿ ಎಸ್ಸಿ ಮತ್ತು ಎಸ್ಟಿ ಅನುದಾನದ ತಲಾ ಎರಡು ಕೋಟಿ ಮೊತ್ತದ ಎರಡು ಕಾಮಗಾರಿಗಳನ್ನು ಪೂರ್ಣಗೊಳಿಸದೆ 4 ಕೋಟಿ ಬಿಲ್ ಬಿಡುಗಡೆ ಮಾಡಿರುವುದು ಟಿವಿಸಿಸಿ ತನಿಖೆಯಲ್ಲಿ ದೃಢಪಟ್ಟಿರುವುದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News