ರಾಜ್ಯದಲ್ಲಿ ಕೋವಿಡ್ ಆರ್ಭಟಕ್ಕೆ ಬಲಿಯಾದವರ ಒಟ್ಟು ಸಂಖ್ಯೆ 30 ಸಾವಿರಕ್ಕೆ ಏರಿಕೆ

Update: 2021-06-02 17:29 GMT

ಬೆಂಗಳೂರು, ಜೂ.2: ರಾಜ್ಯದಲ್ಲಿ ಬುಧವಾರ 16,387 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 463 ಜನರು ಸೋಂಕಿಗೆ ಬಲಿಯಾಗಿದ್ದು, 21,199 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 26,35,122ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 30,017ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 2,93,024ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

463 ಸೋಂಕಿತರು ಬಲಿ: ಬಾಗಲಕೋಟೆ 1, ಬಳ್ಳಾರಿ 8, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 307, ಚಾಮರಾಜನಗರ 4, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 2, ಚಿತ್ರದುರ್ಗ 3, ದಕ್ಷಿಣ ಕನ್ನಡ 5, ದಾವಣಗೆರೆ 5, ಧಾರವಾಡ 5, ಗದಗ 4, ಹಾಸನ  12, ಹಾವೇರಿ 6, ಕಲಬುರಗಿ 4, ಕೊಡಗು 1, ಕೋಲಾರ 2, ಕೊಪ್ಪಳ 7, ಮಂಡ್ಯ 2, ಮೈಸೂರು 12, ರಾಯಚೂರು 3, ರಾಮನಗರ 1, ಶಿವಮೊಗ್ಗ 10, ತುಮಕೂರು 7, ಉಡುಪಿ 2, ಉತ್ತರ ಕನ್ನಡ 9, ವಿಜಯಪುರ  ಜಿಲ್ಲೆಯಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 16,387 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ  ಬಾಗಲಕೋಟೆ 262, ಬಳ್ಳಾರಿ 525, ಬೆಳಗಾವಿ 1006, ಬೆಂಗಳೂರು ಗ್ರಾಮಾಂತರ 164,  ಬೆಂಗಳೂರು ನಗರ 4,095, ಬೀದರ್ 23, ಚಾಮರಾಜನಗರ 258, ಚಿಕ್ಕಬಳ್ಳಾಪುರ 360, ಚಿಕ್ಕಮಗಳೂರು 214, ಚಿತ್ರದುರ್ಗ 483, ದಕ್ಷಿಣ ಕನ್ನಡ 618, ದಾವಣಗೆರೆ 535, ಧಾರವಾಡ 245, ಗದಗ 285, ಹಾಸನ 520, ಹಾವೇರಿ 79, ಕಲಬುರಗಿ 117, ಕೊಡಗು 298, ಕೋಲಾರ 389, ಕೊಪ್ಪಳ 295, ಮಂಡ್ಯ 711, ಮೈಸೂರು 1,687, ರಾಯಚೂರು 249, ರಾಮನಗರ 165, ಶಿವಮೊಗ್ಗ 548, ತುಮಕೂರು 882, ಉಡುಪಿ 636, ಉತ್ತರ ಕನ್ನಡ 456, ವಿಜಯಪುರ 166, ಯಾದಗಿರಿ ಜಿಲ್ಲೆಯಲ್ಲಿ 116 ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ 307 ಜನರು ಸಾವು

ರಾಜಧಾನಿಯಲ್ಲಿ ಬುಧವಾರದಂದು 4,095 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 307 ಜನರು ಮೃತಪಟ್ಟಿದ್ದಾರೆ. 8,620 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 11,70,742 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 13,929 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 10,17,942 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News