ಮ್ಯಾನ್ಹೋಲ್ಗೆ ಇಳಿದು ಮೂವರು ಕಾರ್ಮಿಕರು ಸಾವು: ಸರಕಾರದಿಂದ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
ಬೆಂಗಳೂರು, ಜೂ. 4: ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್ಹೋಲ್ಗೆ ಇಳಿದು ವಿಷಾನೀಲ ಸೇವಿಸಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದ್ದು, ಸರಕಾರದ ವತಿಯಿಂದ ತಕ್ಷಣವೇ ಪರಿಶಿಷ್ಟ ಜಾತಿಯ ಇಬ್ಬರಿಗೆ ತಲಾ 18.5 ಲಕ್ಷ ರೂ. ಹಾಗೂ ಓರ್ವ ಹಿಂದುಳಿದ ವರ್ಗದ ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಘಟನೆ ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಾ.ಅಶ್ವತ್ಥ ನಾರಾಯಣ, ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದರು. ಅಲ್ಲದೆ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು, ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.