ಕಟ್ಟಡ ಕಾರ್ಮಿಕರಿಗೆ ಪರಿಹಾರ ಧನ ವರ್ಗಾವಣೆ ಪ್ರಕ್ರಿಯೆಗೆ ಸಿಎಂ ಯಡಿಯೂರಪ್ಪ ಚಾಲನೆ

Update: 2021-06-05 07:19 GMT
Photo: Twitter.com/CMofKarnataka

ಬೆಂಗಳೂರು, ಜೂ.5: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಸರ್ಕಾರದಿಂದ ಘೋಷಣೆ ಮಾಡಿರುವ ಕೋವಿಡ್ 2ನೇ ಅಲೆಯ ಪರಿಹಾರ ಸಹಾಯಧನವನ್ನು ನೇರವಾಗಿ ಅವರುಗಳ ಬ್ಯಾಂಕ್ ಖಾತೆಗೆ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಜಮೆ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ರವರು ಚಾಲನೆ ನೀಡಿದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಕಾರ್ಮಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಿ. ಕಲ್ಪನಾ, ಇ-ಆಡಳಿತ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ, ಕಾರ್ಮಿಕ ಆಯುಕ್ತ ಅಕ್ರಮ್ ಪಾಷಾ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News