ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಮುಂಭಡ್ತಿ ಸಂಬಂಧ ಹೈಕೋರ್ಟ್ ಗೆ ಅರ್ಜಿ: ಸುರೇಶ್ ಕುಮಾರ್
Update: 2021-06-05 16:46 GMT
ಬೆಂಗಳೂರು, ಜೂ.5: ಒಂದರಿಂದ ಐದನೇ ತರಗತಿಯಲ್ಲಿ ಬೋಧಿಸುತ್ತಿರುವ ಶಿಕ್ಷಕರಿಗೆ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಪದೋನ್ನತಿ ನೀಡುವ ಸಂಬಂಧ ಕೆಎಟಿ ತೀರ್ಪಿನ ಹಿನ್ನೆಲೆಯಲ್ಲಿ ಕೂಡಲೇ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ, ಆಯುಕ್ತರಿಗೆ ಪತ್ರ ಬರೆದಿರುವ ಅವರು, ಯಾವುದೇ ಶಿಕ್ಷಕರಿಗೆ ತೊಂದರೆಯಾಗದ ರೀತಿಯಲ್ಲಿ ಪೂರ್ವಭಾವಿ ಕ್ರಮಗಳನ್ನು ಚಾಲ್ತಿಯಲ್ಲಿಡುವುದು. ವೃಂದ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಪ್ರಸ್ತಾವನೆಗೆ ಈಗಾಗಲೇ ಸೂಚಿಸಲಾಗಿದ್ದು, ಅದರ ಪ್ರಸ್ತುತ ಹಂತವನ್ನು ವಿವರಿಸುವುದರ ಜತೆಯಲ್ಲಿ ಕೂಡಲೇ ಅಗತ್ಯ ತಿದ್ದುಪಡಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.