ಸುರೇಶ್ ಚೇಳಾಯಾರು
Update: 2021-06-05 17:16 GMT
ಮಂಗಳೂರು, ಜೂ.5: ಸುರತ್ಕಲ್ ಸಮೀಪದ ಚೇಳಾಯಾರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಮುಖ್ಯ ಶಿಕ್ಷಕ ಸುರೇಶ್ ಚೇಳಾಯಾರು ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ಗೆ ಬಲಿಯಾದರು.
ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.
ಹಲವು ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಇವರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷರಾಗಿ ಮತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು.