ಯುವಕನಿಗೆ ತಂಡದಿಂದ ಹಲ್ಲೆ ಆರೋಪ: ದೂರು

Update: 2021-06-05 17:23 GMT

ಉಳ್ಳಾಲ: ಅಪಘಾತದ ಕಾರಣ ತಂಡವೊಂದು ಬೈಕ್ ಸವಾರನಿಗೆ ಹಲ್ಲೆಗೈದಿದ್ದಾರೆ ಎನ್ನಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. 

ಉಳ್ಳಾಲ ಧರ್ಮನಗರ ನಿವಾಸಿ ದಿವಾಕರ್ (34) ಹಲ್ಲೆಗೊಳಗಾದವರು.  ಸೈಫ್ ಹಾಗೂ ಇನ್ನಿಬ್ಬರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ದಿವಾಕರ ಗುರುವಾರ ಉಳ್ಳಾಲದ ಅಬ್ಬಕ್ಕ ಸರ್ಕಲ್ ನ ಎಟಿಎಂ ಸೆಂಟರ್ ಬಳಿ ತನ್ನ ಬೈಕನ್ನು ಧರ್ಮನಗರದ ಕಡೆಗೆ ತಿರುಗಿಸುತ್ತಿದ್ದ ವೇಳೆ ಹಿಂದಿನಿಂದ ಸ್ಕೂಟಿ ಚಲಾಯಿಸಿಕೊಂಡು ಬಂದ ಮಹಿಳೆ ದಿವಾಕರ್ ಅವರ ಬೈಕಿಗೆ ಢಿಕ್ಕಿಯಾಗಿದ್ದರು ಎನ್ನಲಾಗಿದೆ. ಈ ವೇಳೆ ಮಹಿಳೆ ಮತ್ತು ದಿವಾಕರ್ ಅವರ ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.

ನಂತರ ತಂಡವೊಂದು ಹಲ್ಲೆ ನಡೆಸಿರುವುದಾಗಿ ದಿವಕರ್ ಅವರು ಇಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News