100ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ಕಳ್ಳಭಟ್ಟಿ ದುರಂತ: ಆರೋಪಿ ಬಿಜೆಪಿ ಮುಖಂಡ ರಿಶಿ ಶರ್ಮಾ ಬಂಧನ
Update: 2021-06-06 12:21 GMT
ಅಲಿಗಢ್: ಕಳ್ಳಭಟ್ಟಿ ಸಾರಾಯಿ ಸೇವಿಸಿ 100ಕ್ಕೂ ಹೆಚ್ಚು ಮಂದಿ ಉತ್ತರಪ್ರದೇಶದ ಅಲಿಗಢ್ ನಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಿಶಿ ಶರ್ಮಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ 10 ದಿನಗಳವರೆಗೆ ಆತ ನಾಪತ್ತೆಯಾಗಿದ್ದ ಎಂದು ತಿಳಿದು ಬಂದಿದೆ. ಆತನನ್ನು ಪತ್ತೆ ಹಚ್ಚಿದರೆ 1ಲಕ್ಷ ರೂ. ಬಹುಮಾನವನ್ನೂ ಘೋಷಿಸಲಾಗಿತ್ತು ಎಂದು hindustantimes.com ವರದಿ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ, ರಾಜಸ್ಥಾನ, ದಿಲ್ಲಿ, ಹರ್ಯಾಣ ಮತ್ತು ಉತ್ತರಪ್ರದೇಶಗಳಲ್ಲಿ ಪೊಲೀಸರು ದಾಳಿ ನಡೆಸುತ್ತಿದ್ದರು. ಹಲವು ಕಾಲ್ ರೆಕಾರ್ಡಿಂಗ್ ಗಳ ಕುರಿತಾದಂತೆಯೂ ವಿಚಾರಣೆ ನಡೆಸಿದ್ದರು. ರಿಶಿ ಶರ್ಮಾನನ್ನು ಬಂದಿಸಲು ಆರು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಕಲಾನಿಧಿ ನೈತಾನಿ ಹೇಳಿಕೆ ನೀಡಿದ್ದಾಗಿ ವರದಿ ತಿಳಿಸಿದೆ.