ಜಲಾವೃತ ಪ್ರದೇಶದ ಜನರಿಗೆ ಕಾಂಗ್ರೆಸ್ ನೆರವು

Update: 2021-06-06 16:56 GMT

ಮಂಗಳೂರು, ಜೂ.6: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬ್ರ 30ರ ಕೊಡಿಯಾಲ್‌ಬೈಲ್ ಪ್ರದೇಶದದಲ್ಲಿ ಶನಿವಾರ ಸುರಿದ ಮಳೆಯಿಂದ ಹಲವು ಮನೆಗಳು ಜಲಾವೃತಗೊಂಡ ಪರಿಣಾಮ ಜರನು ಸಂಕಷ್ಟಕ್ಕೀಡಾದರು.

ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ವಾರ್ಡ್‌ನ ಮಾಜಿ ಕಾರ್ಪೊರೇಟರ್ ಪ್ರಕಾಶ್ ಸಾಲಿಯಾನ್ ಹಾಗೂ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳಿಗೆ ಊಟ ಹಾಗೂ ಅಗತ್ಯ ನೆರವನ್ನು ನೀಡಲಾಯಿತು.

ಈ ಸಂದರ್ಭ ಮಂಗಳೂರು ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಲಿಯಾಕತ್ ಶಾ, ರಾಜೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News