ಸನ್ ಗ್ರೂಪ್ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 3 ಕೋಟಿ ರೂ. ದೇಣಿಗೆ
Update: 2021-06-07 15:09 IST
ಬೆಂಗಳೂರು, ಜೂ.7: ಸನ್ ಗ್ರೂಪ್ ವತಿಯಿಂದ 'ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿ'ಗೆ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಹಸ್ತಾಂತರ ಮಾಡಲಾಯಿತು.
ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಆರೋಗ್ಯ ಸಚಿವ ಸುಧಾಕರ್, ಸನ್ ಟಿವಿ ನೆಟ್ವರ್ಕ್ ಸಂಸ್ಥೆಯ ಮುಖ್ಯಸ್ಥೆ ಕಾವೇರಿ ಕಲಾನಿಧಿ ಮಾರನ್, ಕಾರ್ಯನಿರ್ವಾಹಕ ನಿರ್ದೇಶಕರುಗಳಾದ ಸೆಲ್ವಂ, ವಿಜಯ್ ಕುಮಾರ್ ಮತ್ತು ಸಂಸ್ಥೆಯ ಜಿತೇಂದ್ರ ಕುಮಾರ್ ಹಾಗೂ ಹರೀಶ್ ಉಪಸ್ಥಿತರಿದ್ದರು.