×
Ad

ಮಂಗಳವಾರ ಉಡುಪಿ ಜಿಲ್ಲೆಯಲ್ಲಿ ಲಸಿಕೆ ಲಭ್ಯತೆ ವಿವರ

Update: 2021-06-07 21:55 IST

ಉಡುಪಿ, ಜೂ.7: ಜಿಲ್ಲೆಯಲ್ಲಿ ಜೂ.8ರಂದು 45 ವರ್ಷ ಮೇಲ್ಪಟ್ಟ ಸಾರ್ವ ಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತ ರಿಗೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಸೇಂಟ್ ಸಿಸಿಲಿ ಶಾಲೆಯ ಲಸಿಕಾ ಕೇಂದ್ರ (200 ಡೋಸ್), ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವ ಕೃಪಾ ಶಾಲಾ ಕೇಂದ್ರದಲ್ಲಿ (100 ಡೋಸ್), ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿ ಯಲ್ಲಿ (100 ಡೋಸ್) ಹಾಗೂ ಕುಕ್ಕಿಕಟ್ಟೆಯ ಎಫ್‌ಪಿಎಐನ ಇಂದಿರಾ ನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಕೇಂದ್ರದಲ್ಲಿ (50 ಡೋಸ್) ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗುವುದು.

ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು ಹಾಗೂ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಲಂಕಾರ್ ಥಿಯೇಟರ್ ಬಳಿಯ ಹಳೆ ಕಟ್ಟಡದಲ್ಲಿ (200 ಡೋಸ್) ಹಾಗೂ ಕುಕ್ಕಿಕಟ್ಟೆಯ ಎಫ್‌ಪಿಎಐ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (50 ಡೋಸ್) ಲಸಿಕೆ ನೀಡಲಾಗುವುದು.

45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿ ಸಿರುವ ಮುಂಚೂಣಿ ಕಾರ್ಯಕರ್ತರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಯನ್ನು ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವ ಕೃಪಾ ಶಾಲಾ ಕೇಂದ್ರದಲ್ಲಿ (100 ಡೋಸ್) ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ (100 ಡೋಸ್) ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆಯನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ (200 ಡೋಸ್) ನೀಡಲಾಗುವುದು.

ಗ್ರಾಮಿಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ -1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು ಹಾಗೂ ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ, 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತ ಪಡಿಸಿಕೊಂಡು ಜೂನ್ 8ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯ ಬಹುದು.

ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನ ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News