ಇಂದಿನ ರಾಜಕೀಯ ಪ್ರಾಮಾಣಿಕ ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತಿಲ್ಲ: ರೋಹಿಣಿ ಸಿಂಧೂರಿ ವರ್ಗಾವಣೆ ಬಗ್ಗೆ ನಟಿ ರಮ್ಯಾ

Update: 2021-06-08 17:29 GMT

ಬೆಂಗಳೂರು, ಜೂ.8: ಇತ್ತೀಚೆಗೆ ವರ್ಗಾವಣೆಯಾದ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದು, 'ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿಯನ್ನು ನಾನು ಯಾವಾಗಲೂ ಮೆಚ್ಚಿದ್ದೇನೆ' ಎಂದು ತಿಳಿಸಿದ್ದಾರೆ.

ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದಿದ್ದು, ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿಯನ್ನು ನಾನು ಯಾವಾಗಲೂ ಮೆಚ್ಚಿದ್ದೇನೆ. ಈಗಲೂ ಮೆಚ್ಚಿಕೊಳ್ಳುತ್ತೇನೆ. ಆದರೆ ಇಂದಿನ ರಾಜಕೀಯ, ಉತ್ತಮ ಕೆಲಸಗಳನ್ನು ಮಾಡುತ್ತಿರುವ ಪ್ರಾಮಾಣಿಕ ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತಿಲ್ಲ ಮತ್ತು ಬೆಂಬಲಿಸುತ್ತಿಲ್ಲ ಎನ್ನುವ ನಿರಾಶೆ ಇದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ರೋಹಿಣಿ ಸಿಂಧೂರಿ ಅವರು ನೀಡಿದ ಸಂದರ್ಶನದ ತುಣುಕೊಂದನ್ನು ಅಪ್‌ಲೋಡ್‌ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News