ಎಲ್ಲಾ ಸರಕಾರಿ ಕಚೇರಿಗಳ ಅವರಣದಲ್ಲಿ ಗಿಡ ನೆಡಲು ಕ್ರಮ: ಉಡುಪಿ ಡಿಸಿ

Update: 2021-06-09 12:52 GMT

ಉಡುಪಿ, ಜೂ.9: ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳ ಅವರಣದಲ್ಲಿ ಲಭ್ಯವಿರುವ ಸ್ಥಳಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲಾ ಅಧಿಕಾರಿಗಳು ಬದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಅಜ್ಜರಕಾಡಿನಲ್ಲಿರುವ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಟ್ಟ ಬಳಿಕ ಅವರು ಮಾತನಾಡುತಿದ್ದರು.

ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಗಿಡಮರಗಳನ್ನು ಉಳಿಸಿ, ಬೆಳೆಸುವುದು ಅತ್ಯಂತ ಅವಶ್ಯಕವಾಗಿದೆ. ಪ್ರತಿಯೊಬ್ಬರೂ ತಮ್ಮ ಮನೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಸರಕಾರಿ ಕಚೇರಿಗಳಲ್ಲಿ ಸಹ ಗಿಡಗಳನ್ನು ನಡುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಜಿಲ್ಲಾ ರೋಗ ವಾಹಕ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಆರೋಗ್ಯ ಇಲಾಖೆಯ ಡಾ.ಪ್ರೇಮಾನಂದ, ಡಾ.ಎಂ.ಜಿ.ರಾಮ, ಡಾ.ರಾಮರಾವ್, ಡಾ. ಚಿದಾನಂದ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News