ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ: ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

Update: 2021-06-10 11:23 GMT

ಬೆಂಗಳೂರು, ಜೂ.10: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಸೀಡಿ ಪ್ರಕರಣ ಸಂಬಂಧ ಸಿಟ್ ತನಿಖಾಧಿಕಾರಿಗಳು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆದರಿಕೆ ಹಾಕಿರುವ ಆರೋಪದಡಿ ಪತ್ರಕರ್ತ ನರೇಶ್ ಗೌಡ ಹಾಗೂ ಶ್ರವಣ್ ಸೇರಿ ಇನ್ನಿತರರನ್ನು ಆರೋಪಿಗಳನ್ನಾಗಿ ಉಲ್ಲೇಖಿಸಿ ಚಾರ್ಜ್‍ಶೀಟ್ ಸಲ್ಲಿಸಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.

ಇತ್ತೀಚಿಗೆ ಸಮ್ಮತಿ ಮೇರೆಗೆ ಲೈಂಗಿಕ ಕ್ರಿಯೆ ನಡೆದಿದೆ ಎಂದು ರಮೇಶ್ ಜಾರಕಿಹೊಳಿ ದೂರಿದ್ದರು ಎನ್ನಲಾಗಿದೆ. ಇನ್ನು, ನರೇಶ್ ಗೌಡ ಹಾಗೂ ಶ್ರವಣ್‍ಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹಾಗಾಗಿ, ಸಂತ್ರಸ್ತ ಯುವತಿ ಸೇರಿದಂತೆ ಇನ್ನಿತರ ಅಂಶಗಳನ್ನು ಉಲ್ಲೇಖಿಸಿ ಸಿಟ್ ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News