ಮೃತ ರೋಗಿಯ ಚಿನ್ನಾಭರಣ ಕಳವು ಆರೋಪ: ವೈದ್ಯಕೀಯ ಸಿಬ್ಬಂದಿ ವಿರುದ್ಧ ದೂರು

Update: 2021-06-10 11:24 GMT

ಬೆಂಗಳೂರು, ಜೂ.10: ಕೋವಿಡ್ ಸೋಂಕಿನ ಸಂಬಂಧ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಯು ಮೃತಪಟ್ಟ ನಂತರ, ಖಾಸಗಿ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಚಿನ್ನಾಭರಣ ಕಳವು ಮಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಯಲಹಂಕ ಠಾಣಾ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. 

ಕೃಷ್ಣಪ್ಪ ಎಂಬುವರು ದೂರು ಸಲ್ಲಿಕೆ ಮಾಡಿದ್ದು, ಇತ್ತೀಚಿಗೆ ಇವರ ಪತ್ನಿ ಭಾಗ್ಯಮ್ಮ ಎಂಬುವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯಮ್ಮ ಕೊನೆಯುಸಿರೆಳೆದಿದ್ದರು.

ತದನಂತರ ಮೃತದೇಹವನ್ನು ಪಡೆದುಕೊಂಡ ಸಂದರ್ಭದಲ್ಲಿ ಭಾಗ್ಯಮ್ಮ ಅವರ 1.3 ಲಕ್ಷ ರೂ. ಮೌಲ್ಯದ 38 ಗ್ರಾಂ ಚಿನ್ನಾಭರಣ ಕಳ್ಳತನವಾಗಿದೆ ಎಂದು ಆರೋಪಿಸಿ ತನಿಖೆ ನಡೆಸುವಂತೆ ದೂರು ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News