ಪಡುಬಿದ್ರಿ: ಸ್ಕೂಟರ್ ಗೆ ಆ್ಯಂಬುಲೆನ್ಸ್ ಢಿಕ್ಕಿ; ಪೊಲೀಸ್ ಸಿಬ್ಬಂದಿಗೆ ಗಾಯ

Update: 2021-06-10 14:04 GMT

ಪಡುಬಿದ್ರಿ: ಮಹಿಳಾ ಪೊಲೀಸ್ ಸಿಬ್ಬಂದಿ ಸಂಚರಿಸುತಿದ್ದ ಸ್ಕೂಟರ್ ಗೆ ಆ್ಯಂಬುಲೆನ್ಸ್ ಢಿಕ್ಕಿಯಾಗಿ ಸಿಬ್ಬಂದಿ ಗಾಯಗೊಂಡ ಘಟನೆ ಪಡುಬಿದ್ರಿ ಪೇಟೆಯಲ್ಲಿ ಗುರುವಾರ ಸಂಭವಿಸಿದೆ.

ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಅನಿತಾ ಎಂಬವರು ದ್ವಿಚಕ್ರ ವಾಹನ ಸವಾರಿ ಮಾಡಿಕೊಂಡು ಠಾಣೆಯಿಂದ ಕಾರ್ಕಳ ರಸ್ತೆ ಕಡೆಗೆ ತೆರಳುತ್ತಿದ್ದಾಗ, ಮಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ಆ್ಯಂಬುಲೆನ್ಸ್ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ-ಕಾರ್ಕಳ ರಸ್ತೆ ಜಂಕ್ಷನ್ ಬಳಿ ಢಿಕ್ಕಿಯಾಗಿದೆ.

ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಅನಿತಾ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಅತೀ ವೇಗವಾಗಿ ಬಂದು ಸ್ಕೂಟರ್ ಗೆ ಢಿಕ್ಕಿಹೊಡೆದ ಆಂಬುಲೆನ್ಸ್, ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಡಿವೈಡರ್ ಮೇಲೇರಿದ ಪರಿಣಾಮ ಪೊಲೀಸ್ ಟ್ರಾಫಿಕ್ ಬೂತ್ ಹಾಗೂ ವೇಗ ತಡೆಗೆ ಇರಿಸಲಾದ ಡ್ರಮ್‍ಗಳು ಹಾನಿಗೊಂಡಿದೆ. ಆಂಬುಲೆನ್ಸ್ ನಲ್ಲಿದ್ದ ಮೃತದೇಹವನ್ನು ಇನ್ನೊಂದು ಆ್ಯಂಬುಲೆನ್ಸ್ ಕಾರವಾರಕ್ಕೆ ಸಾಗಿಸಲಾಗಿದೆ. ಘಟನೆ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News